ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರಿನಲ್ಲಿ, ಗ್ರಾಮಸ್ಥರು ವಿದ್ಯುತ್ ಶುಲ್ಕ ಪಾವತಿಸದೇ ಮೀಟರ್ ರೀಡರ್ಗೆ ಬಂದಿದ್ದ ವ್ಯಕ್ತಿಯನ್ನು ವಾಪಸ್ ಕಳುಹಿಸಿದ್ದಾರೆ. ವಿದ್ಯುತ್ ನಿಮಗೂ ಫ್ರೀ, ನಮಗೂ ಫ್ರೀ ಹಾಗೂ ಅಧಿಕಾರಗಳಿಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಅಲ್ಲದೇ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಸಹ ನೀಡಿದೆ. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚಾಮರಾಜನಗರ ಜಿಲ್ಲೆಯಿಂದ ಮೂವರು ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿದ್ದೇವೆ. ನಾವು ಯಾಕೆ ಬಿಲ್ ಕಟ್ಟಬೇಕು ಬಿಲ್ ಕಟ್ಟಲ್ಲ ಎಂದು ಬಿಲ್ ಪಡೆಯಲು ನಿರಾಕರಿಸಿ ಚೆಸ್ಕಾಂ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದಾರೆ.