ಕೇರಳದ ಲ್ಲಿ ಆನೆ ತುಳಿದ್ರೆ 15 ಲಕ್ಷ ಕೊಡ್ತೀರಿ, ಇಲ್ಲಿ 5 ಲಕ್ಷ ನೀಡ್ತೀರಿ: ಹೆಚ್‍ಡಿಕೆ ಕೆಂಡಾಮಂಡಲ

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡುವ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ಸಲಹೆಗಾರರು ಹೇಳಿದಂತೆ ಮಹಾನುಭಾವರು ಕೇರಳದ ಮೃತ ವ್ಯಕ್ತಿಗೆ 15 ಲಕ್ಷ ರೂಪಾಯಿ ಪರಿಹಾರ ಕೊಟ್ಟಿದ್ದಾರೆ. ಅದೇ ಇಲ್ಲಿ ಏನಾದರೂ ಆನೆ ತುಳಿದು ವ್ಯಕ್ತಿ ಮೃತಪಟ್ಟರೆ ಕೇವಲ 5 ಲಕ್ಷ ಕೊಡ್ತೀರಿ. ಅದಕ್ಕೂ ಕಚೇರಿಗೆ ಅಲೆಯಬೇಕು.ವಯನಾಡಿನ ಸಂಸದರು ಹೇಳಿದರು ಅಂತ ಸಿದ್ದರಾಮಯ್ಯನನವರು ನಮ್ಮ ತೆರಿಗೆ ನಮ್ಮ ಹಕ್ಕಿನ 15 ಲಕ್ಷ ರೂ. ಕೊಟ್ಟಿದ್ದಾರೆ. ನಮ್ಮ ತೆರಿಗೆಯಲ್ಲಿ ತೆಲಂಗಾಣದಲ್ಲಿ ಜಾಹೀರಾತು ಕೊಟ್ಟಿದ್ದರು. ನಮ್ಮ ತೆರಿಗೆ ನಮ್ಮ ಹಕ್ಕು ಅಂತ ದೆಹಲಿಗೆ ಹೋದವರು ಇಲ್ಲಿ ಈ ರೀತಿ ನಮ್ಮ ತೆರಿಗೆ ಹಣ ಖರ್ಚು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೆಚ್‍ಡಿಕೆ ಗರಂ ಆದರು. 

Leave a Reply

Your email address will not be published. Required fields are marked *