ವಿಧಾನಸೌಧ ಕಾರಿಡಾರ್ ನಲ್ಲಿ ಡಿಕೆ ಸುರೇಶ್ ಹಾಗೂ ಎಂ.ಬಿ.ಪಾಟೀಲ್ ಮುಖಾಮುಖಿ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್ ಅವರು, ನಾನು ವಿಧಾನಸೌಧದಲ್ಲಿ ಶಾಸಕಾಂಗ ಸಭೆ ಮುಗಿಸಿ ಹೊರಟಿದ್ದಾಗ ಕಾರಿಡಾರ್ನಲ್ಲಿ ನನ್ನನ್ನು ಕರೆದ ಸಂಸದ ಡಿ.ಕೆ. ಸುರೇಶ್ಅವರು ಗಟ್ಟಿಯಾಗಿ ಇರ್ರಿ ಎಂ.ಬಿ.ಪಾಟೀಲ್ರೇ ಅಂದ್ರು.. ನಿಮ್ಮ ಜೊತೆ ಆಮೇಲೆಮಾತಾಡ್ತೇನೆ ಅಂತ ನಾನು ಹೇಳಿದೆ. ಡಿಕೆ ಸುರೇಶ್ಗೂ ನಾನು ವಾರ್ನಿಂಗ್ ಮಾಡಿಲ್ಲ, ಸುರೇಶ್ ನನಗೆ ವಾರ್ನಿಂಗ್ ಮಾಡಿಲ್ಲ. ನನಗೆ ವಾರ್ನಿಂಗ್ ಕೊಡೋರು ಯಾರೂ ಇಲ್ಲ. ಡಿ.ಕೆ.ಸುರೇಶ್ ಗೆ ವಾರ್ನಿಂಗ್ ಕೊಡೊರೂ ಯಾರೂ ಇಲ್ಲ. ವಾರ್ನಿಂಗ್ ಗೀರ್ನಿಂಗ್ ನಮ್ಮ ಡಿಕ್ಷನರಿಯಲ್ಲಿಯೇ ಇಲ್ಲ. ವಾರ್ನಿಂಗ್ ನಾವು ಕೊಡ್ತೇವೇಯೇ ಹೊರತು ತಗೋಳೋದು ಇಲ್ಲ ಇದನ್ನು ಬಿಟ್ಟು ನನಗೆ ವಾರ್ನಿಂಗ್ ಮಾಡಿದರು ಎನ್ನುವುದು ಸುಳ್ಳು ಇದನ್ನು ತಪ್ಪಾಗಿ ಅರ್ಥೈಸುವುದು ಬೇಡ ಎಂದು ಸಚಿವ ಎಂ.ಬಿ. ಪಾಟೀಲ್ಸ್ಪಷ್ಟನೆ ನೀಡಿದರು.