ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕರ್ನಾಟಕ ಸಿಎಂ ಮತ್ತು ಮಹಾರಾಷ್ಟ್ರ ಸಿಎಂ ಮುಖಾಮುಖಿಯಾಗಲಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ. ಇಂದು ಅಮಿತ್ ಶಾ ಸಂಜೆ 7 ಗಂಟೆಗೆ ದೆಹಲಿಯಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ. ದೆಹಲಿಯಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮುಖಾಮುಖಿಯಾಗಲಿದ್ದಾರೆ. ಗಲಭೆಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಸಂಘಟನೆಗಳನ್ನು ನಿಯಂತ್ರಿಸಲು ಹಾಗೂ ಎರಡು ರಾಜ್ಯಗಳಲ್ಲೂ ಶಾಂತಿ ಕಾಪಾಡಲು ಅಮಿತ್ ಶಾ ಕಠಿಣ ಎಚ್ಚರಿಗೆ ನೀಡಬಹುದು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *