ಗೂಗಲ್ ಹಾಗೂ ಆಲ್ಫಾಬೆಟ್ ಸಿಇಒ ಆಗಿರುವ ಸುಂದರ್ ಪಿಚೈ ಅವರಿಗೆ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ

ವ್ಯಾಪಾರ ಮತ್ತು ಕೈಗಾರಿಕಾ ವಿಭಾಗದಲ್ಲಿ ಗೂಗಲ್ ಹಾಗೂ ಆಲ್ಫಾಬೆಟ್ ಸಿಇಒ ಆಗಿರುವ ಸುಂದರ್ ಪಿಚೈ ಅವರಿಗೆ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ಅಮೆರಿಕ-ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಪಿಚೈ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಶಸ್ತಿ ಹಸ್ತಾಂತರಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪಿಚೈ, ಈ ಅಪಾರ ಗೌರವಕ್ಕಾಗಿ ನಾನು ಭಾರತದ ಜನರಿಗೆ ಕೃತಜ್ಞನಾಗಿದ್ದೇನೆ. ನನ್ನನ್ನು ರೂಪಿಸಿದ ದೇಶದಿಂದಲೇ ಈ ರೀತಿ ಗೌರವಿಸಲ್ಪಟ್ಟಿರುವುದು ನಂಬಲು ಸಾಧ್ಯವೇ ಆಗುತ್ತಿಲ್ಲ. ಭಾರತ ದೇಶ ಎಂದಿಗೂ ನನ್ನ ಭಾಗವಾಗಿರುತ್ತದೆ. ನಾನು ಎಲ್ಲಿಗೇ ಹೋದರೂ ಭಾರತವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ ಎಂದು ಕೊಂಡಾಡಿದರು.

Leave a Reply

Your email address will not be published. Required fields are marked *