ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ ಆಗಿಲ್ಲ ಮೋದಿಯವರೇ: ಸಿಎಂ ಸಿದ್ದರಾಮಯ್ಯ

ಸರ್ಕಾರ 100 ದಿನ ಪೂರೈಸಿದ ವಿಚಾರಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಇದೇನು ಸವಾಲು ಅನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇದೆ. ಪ್ರಧಾನಿ ಮೋದಿ ಕೂಡ ಗ್ಯಾರಂಟಿ ಯೋಜನೆಗಳ ಕುರಿತು ಆರೋಪ ಮಾಡುತ್ತಿದ್ದರು. ಆದರೆ, ಅವರು ಹೇಳಿದಂತೆ ರಾಜ್ಯ ಸರ್ಕಾರವೇನು ದಿವಾಳಿ ಆಗಿಲ್ಲ. ಎಲ್ಲಾ ಯೋಜನೆಗಳನ್ನು ನಾವು ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು. ಗೃಹಲಕ್ಷ್ಮಿಗೆ ವಾರ್ಷಿಕ .32 ಸಾವಿರ ಕೋಟಿ ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟುದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದರು.

Leave a Reply

Your email address will not be published. Required fields are marked *