ಛತ್ತೀಸ್‌ಗಢದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು ಐಇಡಿ ಸ್ಫೋಟದಲ್ಲಿ 10 ಜವಾನರು ಹಾಗೂ ಚಾಲಕ ಸೇರಿ 11 ಜನ ಹುತಾತ್ಮರಾಗಿದ್ದಾರೆ

ಛತ್ತೀಸ್‌ಗಢದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು, 10 ಜವಾನರು ಹುತಾತ್ಮರಾಗಿದ್ದಾರೆ, ಛತ್ತೀಸ್‌ಗಢದ ದಾಂತೆವಾಡಾ ಜಿಲ್ಲೆಯ ಅರಣ್‌ಪುರ ಬಳಿ ಗುರುವಾರ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಿ ವಾಪಸ್‌ ಹೋಗುತ್ತಿದ್ದಾಗ ಈ ಬರ್ಬರ ಕೃತ್ಯ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 10 ಜನ ಜವಾನರು ಹಾಗೂ ಚಾಲಕ ಸೇರಿ 11 ಜನ ವಾಹನದಲ್ಲಿ ಹೋಗುತ್ತಿದ್ದಾಗ ಸಂಪೂರ್ಣ ವಾಹನವನ್ನೇ ಸ್ಪೋಟಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಈ ಘಟನೆ ಬಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌ ಟ್ವೀಟ್‌ ಮಾಡಿದ್ದು, ಮಾಹಿತಿಯು ನಮ್ಮ ಬಳಿ ಇದೆ. ಇದು ತುಂಬಾ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಹೋರಾಟ ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. 

 

Leave a Reply

Your email address will not be published. Required fields are marked *