ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರಕ್ಕೆ ಸಂಬಂಧಿದಂತೆ ಮಣಿಪುರದ ಪರಿಸ್ಥಿತಿ ಏನೆಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ ಮಲ್ಲಿಕಾರ್ಜುನ ಖರ್ಗೆ. ಸಂಸತ್ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲಿ ಪ್ರಧಾನಿ ಸದನದ ಹೊರಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನ ಒಳಗೆ ಸಮಗ್ರ ಹೇಳಿಕೆ ನೀಡುವುದು ಅವರ ಕರ್ತವ್ಯ ಸದನದಲ್ಲಿ ನಿಯಮ 267ರ ಅಡಿಯಲ್ಲಿ ಚರ್ಚೆ ನಡೆಯಬೇಕು. ಆದರೆ ಮೋದಿ ಸರ್ಕಾರದ ಸಚಿವರು ಅಲ್ಪಾವಧಿ ಚರ್ಚೆ ಮಾತ್ರ ಎಂದು ಹೇಳುತ್ತಾರೆ. ಮತ್ತೊಬ್ಬರು ಕೇವಲ ಅರ್ಧ ಗಂಟೆ ಚರ್ಚೆ ಎಂದು ಹೇಳುತ್ತಾರೆ. ನಿಯಮ 267 ಚರ್ಚೆ ಗಂಟೆಗಟ್ಟಲೆ ನಡೆಯಬಹುದು. ಮತದಾನವೂ ಆಗಬಹುದು. ಅದಕ್ಕೂ ಮೊದಲು ಪ್ರಧಾನಿಯವರು. ವಿವರವಾದ ಹೇಳಿಕೆ ನೀಡಬೇಕು. ಬಳಿಕ 267ರ ಅಡಿಯಲ್ಲಿ ಸಂಸತ್ತಿನಲ್ಲಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ನಾವು ರಾಜ್ಯಸಭಾ ಅಧ್ಯಕ್ಷರು ಮತ್ತು ಲೋಕಸಭೆಯ ಸ್ಪೀಕರ್ಗೆ ವಿನಂತಿಸುತ್ತೇವೆ. ತಮ್ಮ ಮೇಲಿನ ಸಾಂವಿಧಾನಿಕ ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ಮೋದಿ ಸರ್ಕಾರ ಮತ್ತು ಬಿಜೆಪಿ ಓಡಿಹೋಗುವಂತಿಲ್ಲ ಎಂದು ಖರ್ಗೆ ಕುಟುಕಿದರು.