ದೇಶದ 75 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯ ಬಜೆಟ್ ಅನ್ನು ನಿಲ್ಲಿಸಲಾಗಿದೆ. ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ. ದೆಹಲಿಯ ಜನರು ತಮ್ಮ ಬಜೆಟ್ ಅನ್ನು ಅಂಗೀಕರಿಸಲು ಕೈಜೋಡಿಸಿ ದೆಹಲಿ ಬಜೆಟ್ ಅನ್ನು ತಡೆಯಬೇಡಿ ಎಂದು ಮನವಿ ಮಾಡುತ್ತೇನೆ. ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಮೋದಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ