ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ್ರೆ ರಾಜ್ಯಕ್ಕೂ, ದೇಶಕ್ಕೂ ಒಳ್ಳೆಯದಾಗುತ್ತೆ: ಕೆಎಸ್ ಈಶ್ವರಪ್ಪ

ಇಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಬಿಜೆಪಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ದೇವೇಗೌಡರ ಮಗ.ಕರ್ನಾಟಕದಲ್ಲಿ ಇಬ್ಬರು ರಾಜಕಾರಣಿಗಳನ್ನ ನಾನು ನೋಡಿದ್ದೇನೆ. ಒಬ್ಬರು ದೇವೇಗೌಡರು, ಇನ್ನೊಬ್ಬರು ಯಡಿಯೂರಪ್ಪ. ಈ ಇಬ್ಬರು ನಾಯಕರು ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಪ್ರವಾಸ ಮಾಡಿದವರು. ಇನ್ನು ದೇವೇಗೌಡರ ಮಾರ್ಗದರ್ಶನದಲ್ಲಿ ಕುಮಾರಸ್ವಾಮಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಒಳ್ಳೆಯ ಆಡಳಿತ ‌ನೀಡಿದ್ದಾರೆ. ಆ ಆಡಳಿತದಿಂದ ‌ಪದೇ ಪದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಾಧ್ಯವಾಯ್ತು ಎಂದರು.ಜೆಡಿಎಸ್ ಈಗಾಗಲೇ ಎನ್‌ಡಿಎ ಜೊತೆಗೆ ಸೇರಿಕೊಂಡಿದೆ ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗುವುದು ನಿಶ್ಚಿತ. ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದರೆ ರಾಜ್ಯದ ರೈತರಿಗೆ ಅನುಕೂಲ ಆಗುತ್ತೆ ಎಂದರು.

Leave a Reply

Your email address will not be published. Required fields are marked *