ವರುಣಾ ಕ್ಷೇತ್ರದ ಬಿಜೆಪಿ ಕೃತಜ್ಞತಾ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿ.ಸೋಮಣ್ಣ ಅವರು, ತುಮಕೂರು ಸಂಸದ ಜಿ.ಎಸ್.ಬಸವರಾಜ ಅವರು ಹಿರಿಯರಾಗಿದ್ದು, ಅವರೊಂದಿಗೆ 40 ವರ್ಷದ ಒಡನಾಟ ಇದೆ. ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಋುಣಿಯಾಗಿದ್ದೇನೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ಗಾಂದಿ, ವಾಜಪೇಯಿ, ನರೇಂದ್ರ ಮೋದಿ ಅವರ ಆಡಳಿತ ವ್ಯವಸ್ಥೆಯನ್ನು ಗಮನಿಸಿದ್ದಾರೆ. ಎಲ್ಲವನ್ನೂ ಬಲ್ಲವರಾಗಿದ್ದು, ಅವರ ಹೇಳಿಕೆಯು ದೊಡ್ಡತನ ತೋರಿಸುತ್ತದೆ ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿ ಅಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ಮೊನ್ನೆಯಾಗಿರುವ ಪೆಟ್ಟು ತಡೆದುಕೊಂಡರೆ ಸಾಕಾಗಿದೆ. ಮತ್ತೆ ಅಂತಹ ಪೆಟ್ಟು ತಿನ್ನಲು ಹೋಗುವುದಿಲ್ಲ’ ನನಗೆ 72 ವರ್ಷವಾಗಿದ್ದು, ಮುಂದಿನ ತಿಂಗಳು 73 ವರ್ಷವಾಗಲಿದೆ. ಚುನಾವಣೆಗೆ ಸ್ಪರ್ಧಿಸಿದ್ದು ಒತ್ತಡ ಎನ್ನುವುದಕ್ಕಿಂತ ನಾಯಕರ ಸಂದೇಶವನ್ನು ತಲೆಮೇಲೆ ಹೊತ್ತುಕೊಂಡು ಹೋಗಿ ಕೆಲಸ ಮಾಡಿದ್ದೇನೆ. ಪುಣ್ಯಾತ್ಮರು ಒಳ್ಳೆಯ ಕೆಲಸ ಮಾಡಿದ್ದಾರೆ. ವರುಣ ಮತ್ತು ಚಾಮರಾಜನಗರದಲ್ಲಿ ನನ್ನನ್ನು ಸೋಲಿಸಬೇಕೆಂದು ‘ಅಲ್ಲಿಂದಲೇ’ ನಿರ್ದೇಶನ ಬಂದಿತ್ತು ನನ್ನ ಸೋಲಿಗೆ ನನ್ನ ಸಮುದಾಯದವರೇ, ಅದರಲ್ಲೂ ಮುಂಚೂಣಿ ನಾಯಕರೇ ಕಾರಣ ಎಂದು ಮಾರ್ಮಿಕವಾಗಿ ಹೇಳಿದರು. ನಂಬಿದವರೇ ನನ್ನ ಕತ್ತು ಕೊಯ್ದರು. ಅದರ ಬಗ್ಗೆ ಬರೆದರೆ ಒಂದು ಪುಸ್ತಕವಾದೀತು ಚಾಮುಂಡೇಶ್ವರಿ ತಾಯಿಯೇ ನನ್ನ ವಿರುದ್ಧದ ಅಪಪ್ರಚಾರವನ್ನು ನೋಡಿ ಕೊಳ್ಳುತ್ತಾಳೆ ಎಂದು ದುಖಿಃತರಾಗೇ ಹೇಳಿದರು. ಯಾವ ಹುತ್ತದಲ್ಲಿ ಯಾವ ಹಾವಿದೆ ಎಂಬುದನ್ನು ಹುಡುಕಲು ಆಗಲಿಲ್ಲ, ಹುಡುಕುವ ಪರಿಸ್ಥಿತಿಗೂ ಬಂದಿಲ್ಲ. ಒಬ್ಬ ಒಳ್ಳೆಯ ಕೆಲಸಗಾರನಾಗಿ ಬೆಳಗ್ಗೆ 4 ಗಂಟೆಯಿಂದ ತಡರಾತ್ರಿಯವರೆಗೆ ದುಡಿದಿದ್ದೇನೆ. ಅವರ ಮಾತನ್ನು ನಂಬಿ ಹೋಗಿದ್ದೆ. ಹೊಸಕೋಟೆಯಲ್ಲಿ ಒಂದು ಮಾತನ್ನು ಹೇಳಿದ್ದು, ಸೋಮಣ್ಣ ಗೆದ್ದರೆ ರಾಜ್ಯದಲ್ಲಿ ಪಕ್ಷವು ಒಂದು ದೊಡ್ಡ ಸ್ಥಾನ ನೀಡಲಿದೆ ಎಂದಿದ್ದರು. ಆದಾದ ಮೇಲೆ ನಡೆದ ಕೆಲವು ನೋವುಗಳು ಎಂದಿಗೂ ಮಾಸುವುದಿಲ್ಲ. ಭಗವಂತ ಉತ್ತರ ನೀಡುತ್ತಾನೆ. ಕಾದು ನೋಡೋಣ, ಪಕ್ಷದ ಸಂದೇಶ ದೊಡ್ಡದು ಎಂದು ಬೇಸರ ವ್ಯಕ್ತಪಡಿಸಿದರು.