ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ವಿರುದ್ಧ ಆಗಸ್ಟ್ 26 ರಂದು ಎಸ್‍ಪಿ ಕಚೇರಿಯ ಮುಂದೆ ಪ್ರತಿಭಟನೆ: ಸಿದ್ದರಾಮಯ್ಯ

ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಮಗಳೂರಿನ ಬಾಸೂರಿನಲ್ಲಿ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಇಡೀ ರಾಜ್ಯ ಇವರದ್ದಾ, ಗೋ ಅಂದ್ರೆ ಎಲ್ಲಿಗೆ ಹೋಗಲಿ. ಇದು ಬಿಜೆಪಿ ಸರ್ಕಾರದ ಹೇಡಿತನ. “ಕರ್ನಾಟಕದ ಭಾರತೀಯ ಜನತಾ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ವಿರುದ್ಧ ಆಗಸ್ಟ್ 26 ರಂದು ಎಸ್‍ಪಿ ಕಚೇರಿಯ ಮುಂದೆ ಪ್ರತಿಭಟನೆ ಮಾಡುತ್ತೇವೆ. ಈ ಸರ್ಕಾರ ಕೆಟ್ಟ ಮತ್ತು ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದರು

Leave a Reply

Your email address will not be published. Required fields are marked *