ಪ್ರಧಾನಿ ಮೋದಿಗೆ ಶಾಲು ಹೊದಿಸಿ,ಮೈಸೂರು ಪೇಟಾ ತೊಡಿಸಿ, ಗಂಧದ ಮರದ ಕೆತ್ತನೆಯ ದಸರಾ ಅಂಬಾರಿ ಗಿಫ್ಟ್‌ಕೊಟ್ಟ ಸಿದ್ದರಾಮಯ್ಯ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿಯಾದರು. ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿ, ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಉಡುಗೊರೆಯನ್ನು ಪ್ರಧಾನಿ ಮೋದಿ ಕುತೂಹಲದಿಂದ ನೋಡಿದರು. ಪರಸ್ಪರರು ಕುಶಲೋಪರಿ ವಿಚಾರಿಸಿದರು. ಬಳಿಕ ಸಿಎಂ ಹಾಗೂ ಪಿಎಂ ಕೆಲಹೊತ್ತು ಮಾತುಕತೆ ನಡೆಸಿದರು. ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್‌ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಅವರನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

Leave a Reply

Your email address will not be published. Required fields are marked *