ಬಾಕಿ ಬಿಲ್ ಕೊಡಲು ಅಧಿಕಾರಿಗಳ ಹಿಂದೇಟು ಹಿನ್ನೆಲೆ ;ಬೆಳಗಾವಿಯಲ್ಲಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

ಬಾಕಿ ಬಿಲ್ ಕೊಡಲು ಅಧಿಕಾರಿಗಳ ಹಿಂದೇಟು ಹಿನ್ನೆಲೆ ಬೆಳಗಾವಿ ಲೋಕೋಪಯೋಗಿ ಇಲಾಖೆ ಕಚೇರಿ‌ಮುಂಭಾಗದಲ್ಲಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಆಗಮಿಸಿದ ಬೈಲಹೊಂಗಲ ತಾಲೂಕಿನ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬೆಳಗಾವಿ ಎಕ್ಸ್‌ಕ್ಯೂಟಿವ್‌ಎಂಜಿನಿಯರ್‌ಎಸ್ ಎಸ್. ಸೊಬರದ ಮುಂದೆಯೇ ಗುತ್ತಿಗೆದಾರ ನಾಗಪ್ಪ ಆತ್ಮಹತ್ಯೆಗೆ ಯತ್ನಿಸಿದರು. ಈ ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Leave a Reply

Your email address will not be published. Required fields are marked *