ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ. ನಾನು ಏಕೆ ಯೋಚನೆ ಮಾಡ್ತಿದ್ದೀನಿ ಅಂದ್ರೆ ವಾರಕ್ಕೊಮ್ಮೆ ಹೋಗಿ ಅಲ್ಲಿ ಇರೋದಕ್ಕೆ ಆಗೋದಿಲ್ಲ. ಅವರ ಕಷ್ಟ ಸುಖಗಳಿಗೆ ಸ್ಪಂದಿಸೋದಕ್ಕೆ ಆಗೋದಿಲ್ಲ. ಕಾರ್ಯಕರ್ತರಿಗೆ ಜನರಿಗೆ ಸಿಗೋದಕ್ಕಾಗಲ್ಲ ನೀವು ಬಂದು ನಿಂತುಕೊಳ್ಳಿ ಅಂತಾ ಅವರು ಹೇಳಬಹುದು. ಆದರೆ ನನಗೆ ಮನಸು ಒಪ್ಪುತ್ತಿಲ್ಲ. 2 ತಿಂಗಳಿನಿಂದ ಬಾದಾಮಿಗೆ ಹೋಗಿಲ್ಲ. ನಾಳೆ ಹೋಗಬೇಕೆಂದುಕೊಂಡಿದ್ದೆ, ಅದೂ ಕ್ಯಾನ್ಸಲ್ ಆಗಿದೆ ಎಂದು ತಿಳಿಸಿದರು.