ಚುನಾವಣೆ ಗೆಲ್ಲೋಕೆ ಪ್ರತಿ ಮತಕ್ಕೆ 6 ಸಾವಿರ ಕೊಡಲು ನಾವು ಸಿದ್ದ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ತಂಡ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಒಂದು ಸಂಚು ರೂಪಿಸುತ್ತಿದೆ. ಇದರಲ್ಲಿ ಬಿಜೆಪಿ ನಡ್ಡಾ, ಕಟೀಲ್, ಸಿಎಂ ಬೊಮ್ಮಾಯಿ,ರಮೇಶ್ ಜಾರಕಿಹೊಳಿ ಇದ್ದಾರೆ. ಇದನ್ನ ರಮೇಶ್ ಕೈಯಲ್ಲಿ ಹೇಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೋಳಿ ಪ್ರತಿ ಮತಕ್ಕೆ 6 ಸಾವಿರ ಕೊಡ್ತೀವಿ ಅಂತಾ ಹೇಳಿದ್ದಾರೆ. 5 ಕೋಟಿ ಮತದಾರರಿಗೆ 6 ಸಾವಿರದಂತೆ 30 ಸಾವಿರ ಕೋಟಿ ಹಣ ಹಂಚಲು ಬಿಜೆಪಿ ಮುಂದಾಗಿದೆ ರಮೇಶ್ ಜಾರಕಿಹೊಳಿ ಹೇಳಿಕೆಯ ಎಲ್ಲಾ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇವೆ. ಪ್ರತಿ ಬೂತ್ನಲ್ಲಿ ಹಣ ಹಂಚಲು ಮುಂದಾಗಿದ್ದಾರೆ. ಈ ಮೂಲಕ ಮತದಾರರಿಗೆ ಲಂಚ ಆಮಿಷ ಒಡ್ಡುತ್ತಿದ್ದಾರೆ. ಕೂಡಲೇ FIR ದಾಖಲು ಮಾಡಿಕೊಂಡು, ಎಲ್ಲರನ್ನು ಬಂಧನ ಮಾಡಬೇಕು. ಎಂದು ಒತ್ತಾಯಿಸಿದರು.