ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿದ್ದರು. ಪತ್ರದಲ್ಲಿ ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದರು. ಹರಿಯಾಣದ ನುಹ್ ಜಿಲ್ಲೆಯ ಘಸೆರಾ ಗ್ರಾಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಜಾತಿ, ಧರ್ಮ ಮರೆತು ಹಿರಿಯರು, ಕಿರಿಯರು ಪ್ರತಿಯೊಬ್ಬರು ಭಾಗವಹಿಸುತ್ತಿದ್ದಾರೆ ಇದರಿಂದ ಬಿಜೆಪಿಗೆ ಭಯ ಶುರುವಾಗಿದೆ. ಕೇಂದ್ರ ಸರ್ಕಾರ ಕೋವಿಡ್ ಹರಡುತ್ತಿದೆ, ಮಾಸ್ಕ್ ಧರಿಸಿ ಎಂದು ಹೇಳುತ್ತಿದೆ. ಇದೆಲ್ಲವೂ ಯಾತ್ರೆ ನಿಲ್ಲಿಸಲು ನೆಪಗಳಷ್ಟೇ ಎಂದು ಗುಡುಗಿದ್ದಾರೆ.