ಮಂಗಳೂರಿನಲ್ಲಿ ನಾಯಕರಿಗೆ ಮೋದಿ ಕೊಟ್ಟ ಟಾಸ್ಕ್, ಮೋದಿ ಕೊಟ್ಟ ಟಾರ್ಗೆಟ್ ರೀಚ್ ಆಗಲು ಪಣ ತೊಟ್ಟ.ಬಿಎಸ್ ಯಡಿಯೂರಪ್ಪ

ಮಂಗಳೂರಿನ ಬಂಗ್ರಕೂಳೂರಿನಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್‌ಸಮಾವೇಶ ಮುಗಿಸಿ ಚಹಾ ವಿರಾಮದಲ್ಲಿ ಬಿಜೆಪಿ ಕೋರ್‌ಕಮಿಟಿ ಸದಸ್ಯರಿಗೆ ಟಾಸ್ಕ್ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲಲು ಕರ್ನಾಟಕ ಬಿಜೆಪಿ ಕೋರ್‌ಕಮಿಟಿ ಸದಸ್ಯರಿಗೆ ಮೋದಿ ಅವರು ಟಾಸ್ಕ್ ನೀಡಿದ್ದಾರೆ.ಇನ್ನು ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಬಿಎಸ್‌ವೈ, ನನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ ರಾಜ್ಯದಲ್ಲಿ ನಮ್ಮದೇ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *