ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ: ಕುಮಾರಸ್ವಾಮಿ ಟಾಂಗ್

ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಮಂಡ್ಯದಲ್ಲಿ, ತುಮಕೂರಿನಲ್ಲಿ ಏನೀನು ಮಾಡಿದರು ಅನ್ನುವುದು ಈಗ ಅವರ ಬಾಯಿಂದಲೇ ಸತ್ಯ ಹೊರಗೆ ಬಂದಿದೆ. ಈಗ ಅದೆಲ್ಲ ಮುಗಿದು ಹೋದ ಅಧ್ಯಾಯ. ನನ್ನ ಸರಕಾರ ತೆಗೆದವರರೇ ಅವರು ಎಂದು ವಾಗ್ದಾಳಿ ನಡೆಸಿದರು. ಇನ್ನೂ ಕೃಷ್ಣ ಕಚೇರಿಯಲ್ಲಿ ದಿನಕ್ಕೆ 5 ಸಾವಿರ ಜನ ಸೇರಿರುತ್ತಿದ್ದರು. ಸಾವಿರಾರು ಜನರನ್ನು ಭೇಟಿಯಾದ ಮೇಲೆ ಶಾಸಕರನ್ನು ಕೂಡ ಭೇಟಿಯಾಗಿ 10-15 ಅಭಿವೃದ್ಧಿ ಸಭೆಗಳನ್ನು ನಡೆಸುತ್ತಿದ್ದೆ. ನಾನೇನು ನಿದ್ದೆ ಮಾಡುತ್ತಿದೀನಾ? ತಪ್ಪು ಮಾಡಿದವರು ಅವರು, ಈಗ ನನ್ನ ಮೇಲೆ ಅಪಾದನೆ ಮಾಡ್ತಾರೆ.ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಚರ್ಚೆ ಮಾಡುವ ಅಂಶಗಳನ್ನು ಇಟ್ಟುಕೊಂಡಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ಕೆದಕಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ.ಸ್ವಲ್ಪ ದಿನ ವಿಷಕನ್ಯೆ, ವಿಷಸರ್ಪ ಇತ್ತು, ಈಗ ಬಜರಂಗಿ ವಿಚಾರ ತಗೊಂಡು ಹೋಗ್ತಿದ್ದಾರೆ. ವೋಟಿಂಗ್ ದಿನ ಈ ವಿಷಯ ಮುಗಿಯುತ್ತದೆ. ಇವರು ಜನರನ್ನು ಯಾಮಾರಿಸುತ್ತಿದ್ದಾರೆ. ನಾನು ವಿಷಯಧಾರಿತವಾಗಿ ಚುನಾವಣೆ ಎದುರಿಸುತ್ತೇನೆ. ನನಗೆ ಆರ್ಥಿಕ ಶಕ್ತಿ ಇದ್ದಿದ್ದರೆ 130 ರಿಂದ 140 ಸೀಟು ಗೆಲ್ಲುತ್ತಿದ್ದೆ. ಹಣ ಇಲ್ಲದೆ ಹಿನ್ನೆಡೆ ಆಗಿದೆ. ಜನ ದುಡ್ಡಿಗೆ ಮರಳಾಗುವುದಿಲ್ಲ ಎಂಬ ವಿಶ್ವಾಸವಿದೆ. ಮುಖ್ಯಮಂತ್ರಿ ತವರು ಕ್ಷೇತ್ರ ಶಿಗ್ಗಾವಿ ಕ್ಷೇತ್ರದಲ್ಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನತಾದಳಕ್ಕೆ ಉತ್ತಮ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಹೇಳಿದರು.

Leave a Reply

Your email address will not be published. Required fields are marked *