ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿರುವ ಹೇಳಿಕೆಯನ್ನು ನಾನು ಸದುದ್ದೇಶದಿಂದ ಹೇಳಿದ್ದೇನೆ ರಾಜ್ಯದ ಹಿತದೃಷ್ಟಿಯಿಂದ ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.