ಭಾರತೀಯ ಸೇನೆ ಮತ್ತು ಚೀನಾ ಸೇನಾ ಪಡೆಗಳ ನಡುವೆ ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಎಲ್ಎಸಿ ಬಳಿ ಡಿಸೆಂಬರ್ 9 ರಂದು ನಡೆದ ಸಂಘರ್ಷ, ಎರಡೂ ದೇಶಗಳ ಗಡಿ ಬಿಕ್ಕಟ್ಟನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಈ ಕುರಿತು ಚರ್ಚೆ ನಡೆಸಬೇಕು ಎನ್ನುವ ವಿಪಕ್ಷಗಳ ಬೇಡಿಕೆಗೆ ಸಂಸತ್ತಿನಲ್ಲಿ ಉಂಟಾದ ಘರ್ಷಣೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಖರ್ಗೆ ಅವರು, `ಮೋದಿ ಸರ್ಕಾರದ ಕೆಂಗಣ್ಣು ಚೀನಾ ಕನ್ನಡಕದಿಂದ ಮುಚ್ಚಲ್ಪಟ್ಟಿದಂತೆ ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ?’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.