ವಿದ್ಯುತ್ ಸಂಪರ್ಕಕ್ಕೆ ಲಂಚ ಹಣದ ಸಮೇತ ಸಿಕ್ಕಿಬಿದ್ದ: ಬೆಸ್ಕಾಂ ಎಂಜಿನಿಯರ್ ಬಂಧನ

ಆಗ್ನೇಯ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಬಿಎನ್ ಸುಜಿತ್ ಕುಮಾರ್ ಮತ್ತು ಇತರರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 2.30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ವಿದ್ಯುತ್ ಗುತ್ತಿಗೆದಾರ ವೇಣುಗೋಪಾಲ್ ಎಸ್. ಎಂಬುವವರು ಲೋಕಾಯುಕ್ತ ಪೊಲೀಸ್ ಬೆಂಗಳೂರು ನಗರ ಘಟಕಕ್ಕೆ ದೂರು ಸಲ್ಲಿಸಿದ್ದರು. ಬೆಸ್ಕಾಂ ಸಹಾಯಕ ಎಂಜಿನಿಯರ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೆ. 20ರಲ್ಲಿ ಅಗರ ವಿಭಾಗಕ್ಕೆ ನಿಯೋಜನೆಗೊಂಡಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್ ಸಂತೋಷ್ ಮತ್ತು ಮಲ್ಲಿಕಾರ್ಜುನ್ ಎಂಬುವರು ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *