ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಜ್ಜಾಗಿದ್ದಾರೆ ಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಯಾವ ಕ್ಷೇತ್ರ ಎನ್ನುವುದನ್ನು ಶೀಘ್ರ ಬಹಿರಂಗಪಡಿಸುತ್ತೇವೆ. ನಾನು ಬಿಜೆಪಿ ಮೇಲೆ ಆಸೆ ಇಟ್ಟಿದ್ದೆ. ಆದರೆ, ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಲಿಲ್ಲ. ಇನ್ನು ಮೇಲೆ ಬಿಜೆಪಿಯವರು ಟಿಕೆಟ್ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ಸ್ವತಂತ್ರನಾಗಿ ಸ್ಪರ್ಧೆ ಮಾಡುತ್ತೇನೆ. ಹಿಂದೂ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ನೋಡಿ ಈ ತೀರ್ಮಾನಕ್ಕೆ ಬಂದಿದ್ದೇನೆ. ಕಾರ್ಯಕರ್ತರ ಆಸೆಯೂ ಇದೇ ಆಗಿದೆ. ನಾನು ಕಟ್ಟರ್ ಹಿಂದೂ ಆಗಿರುವುದರಿಂದ ಕಾಂಗ್ರೆಸ್, ಜೆಡಿಎಸ್ನವರು ನನಗೆ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ. ನಾನು ಪಕ್ಷವನ್ನೂ ಕಟ್ಟುವುದಿಲ್ಲ. ಚುನಾವಣೆಯಲ್ಲಿ ಗೆಲುವು ಸಾಧಿಸಿದರೂ ನಾನು ಹಿಂದೂ ತತ್ವ ಸಿದ್ಧಾಂತದ ಮೇಲೆ ಇರುವ ಬಿಜೆಪಿಗೆ ಬೆಂಬಲ ಸೂಚಿಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.