ವಿಧಾನಸೌಧದಲ್ಲಿ ಪಾಕ್‌ ಘೋಷಣೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ ವರದಿ ಬರಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ 

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸೌಧದಲ್ಲಿ ಪಾಕ್‌ ಘೋಷಣೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ ವರದಿ ಬರಬೇಕು ಎಂದು ಹೇಳಿದ್ದಾರೆ. ವರದಿ ಬಂದ ಮೇಲೆ‌ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ 7 ಮಂದಿಯನ್ನು ಕರೆದು ತನಿಖೆ ಮಾಡಿ ವಾಯ್ಸ್ ರೆಕಾರ್ಡ್ ಸಹಾ ಮಾಡಿದ್ದೇವೆ. ಧ್ವನಿ ತಾಳೆಯಾಗಬೇಕು.ಒಂದು ವಾಹಿನಿಯದ್ದು ಅಲ್ಲ ಸಾಕಷ್ಟು ಕ್ಲಿಪ್ ಇದೆ. ಎಲ್ಲವನ್ನೂ ಪರೀಕ್ಷೆ ಮಾಡಬೇಕಾಗುತ್ತದೆ ಎಂದರು.ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವರದಿಯಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದರಂತೆ ಮುಂದುವರಿಯೋಣ ಎಂದು ಸಿಎಂ ಹೇಳಿದ್ದಾರೆ. ಡೇಟಾ ಹೊರಗೆ ಬರುವವರೆಗೂ ಏನೂ ಹೇಳಲಾಗದು ಎಂದು ಹೇಳಿದರು. 

Leave a Reply

Your email address will not be published. Required fields are marked *