ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಪಿತೂರಿ ಕೆಲಸ ನಡೆಯುತ್ತಿದೆ ಆ ಬಗ್ಗೆ ನಮಗೂ ಮಾಹಿತಿ ಇದೆ: ಡಿ ಕೆ ಶಿವಕುಮಾರ್‌

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *