ಸಿಎಂ, ಡಿಸಿಎಂ ಉಗ್ರರಿಗೆ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ – ಬಿಜೆಪಿ ಆಕ್ರೋಶ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಗೃಹ ಸಚಿವ ಪರಮೇಶ್ವರ್ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ್ದರು. ಇದರ ಪರಿಣಾಮ ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ ಎಂದು ಬಿಜೆಪಿ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಬೆಂಗಳೂರಿನ ಸುಮಾರು 70 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇರಿಸಿದ್ದಾಗಿ ಬೆದರಿಕೆಯ ಇ-ಮೇಲ್‍ಗಳು ಬಂದಿದ್ದವು. ಇದರಿಂದ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ಶಿಕ್ಷಕರು ಆತಂಕಕ್ಕೊಳಗಾಗಿದ್ದರು. ಈ ಸಂಬಂಧ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಎಲ್ಲಾ ಶಾಲೆಗಳಿಗೂ ತೆರಳಿ ಪರಿಶೀಲನೆ ನಡೆಸಿತ್ತು. ಯಾವ ಶಾಲೆಗಳಲ್ಲೂ ಬಾಂಬ್ ಪತ್ತೆಯಾಗಿರಲಿಲ್ಲ.

Leave a Reply

Your email address will not be published. Required fields are marked *