ಪ್ರಧಾನಿ ನರೇಂದ್ರ ಮೋದಿ ಎದುರು ನಾಯಿಮರಿ ರೀತಿ ನಿಲ್ಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ. ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ. ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಎಲ್ಲರ ಮನ ನೋಯಿಸಿದೆ. ಸಿದ್ದರಾಮಯ್ಯನವರ ವರ್ತನೆಯನ್ನು ಖಂಡಿಸುತ್ತೇನೆ. ಅವರು ಆಡಿದ ಮಾತುಗಳಿಗೆ, ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದರು.