ಸಿದ್ದು-ಡಿಕೆಶಿಯನ್ನ ಜೋಡ್ಸಿ ನಿಲ್ಲಿಸೋದು ಇಬ್ಬರಮುಖದಲ್ಲಿ ನಗು ಮೂಡಿಸೋದು… ನನ್ನ ಸಂದೇಶ ಇದು ರಾಹುಲ್ ಗಾಂಧಿಯ ಜೋಡೋ ತಂತ್ರ. ಸಿದ್ದು-ಡಿಕೆಶಿ ಜೋಡೋ. ಕರ್ನಾಟಕದ ಭಿನ್ನರಾಗಗಳನ್ನ ಸರಿಪಡಿಸಿ ಲಯಬದ್ಧ ರಾಗವಾಗಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ರು. ಯಾತ್ರೆಯಲ್ಲಿ ಒಳಸುಳಿಯೊಳಗೆ ಕರ್ನಾಟಕದ ನಾಯಕತ್ವದ ಭಿನ್ನ ಧ್ವನಿಗಳನ್ನ ಹತ್ತಿಕ್ಕಲು ಸಿದ್ದು-ಡಿಕೆ ಜೋಡೋ ಅಂತಾ ಸಂದೇಶ ರವಾನಿಸಿದ್ದು ಸ್ಪಷ್ಟವಾಗಿದೆ.