ಸುದೀಪ್ ನನಗೆ ಬೆಂಬಲಿಸುತ್ತಾರೆ ಅಂದರೆ, ಅದು ಬಿಜೆಪಿಗೆ ಬೆಂಬಲಿಸಿದಂತೆ’ : ಸಿಎಂ ಬೊಮ್ಮಾಯಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ನಾನು ಚುನಾವಣೆಯಲ್ಲಿ ಬೆಂಬಲಿಸಲು ಬಂದಿದ್ದೇನೆ. ಚಿಕ್ಕಂದಿನಿಂದಲೂ ನನಗೆ ಅವರು ಪರಿಚಯ. ನನ್ನ ಕಷ್ಟ ಕಾಲದಲ್ಲಿ ಅವರು ನನ್ನೊಂದಿಗೆ ನಿಂತಿದ್ದಾರೆ. ಹಾಗಾಗಿ ಬೆಂಬಲ ಸೂಚಿಸುತ್ತಿದ್ದೇನೆ ಎಂದು ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಅವರು ಅಪ್ಪಿತಪ್ಪಿಯೂ ಹೇಳಿಲ್ಲ. ಹಾಗಾಗಿ ಮಾಧ್ಯಮದವರು ಬಿಜೆಪಿಯನ್ನು ಬೆಂಬಲಿಸುತ್ತಿಲ್ಲವಾ? ಎಂದು ಪ್ರಶ್ನೆ ಮಾಡಿದರು. ಈ ಕುರಿತು ಸುದೀಪ್ ಯಾವುದೇ ಸ್ಪಷ್ಟನೆ ನೀಡಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮೈಕ್ ತಗೆದುಕೊಂಡು, ‘ನನಗೆ ಬೆಂಬಲಿಸುತ್ತಾರೆ ಅಂದರೆ, ಅದು ಬಿಜೆಪಿಗೆ ಬೆಂಬಲಿಸಿದಂತೆ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರೂ, ಸುದೀಪ್ ಯಾವುದೇ ಕಾರಣಕ್ಕೂ ಬಿಜೆಪಿ ಎನ್ನುವ ಪದವನ್ನೇ ಬಳಸಲಿಲ್ಲ. ಜಾಣ್ಮೆಯ ನಡೆಯನ್ನು ಈ ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

Leave a Reply

Your email address will not be published. Required fields are marked *