ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಮಾತನಾಡಿದ ದೂರುದಾರ ಮತ್ತು ವಕೀಲ ದೇವರಾಜೇಗೌಡ ಅವರು, ಸಾಮಾನ್ಯ ಹಾಗೂ ಪ್ರಾಮಾಣಿಕ ವಕೀಲನಿಗೆ ಸಿಕ್ಕಿ ಜಯ ಇದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇದುವರೆಗೂ ಬಂದ ಆಮಿಷಗಳಿಗೆ ಒಳಗಾಗಲಿಲ್ಲ. ಬೆದರಿಕೆಗೂ ಹೆದರಲಿಲ್ಲ. ಇದೆಲ್ಲದರ ನಡುವೆ ಪ್ರಜ್ವಲ್ರೇವಣ್ಣ ಅವರ ಅಪರಾಧಗಳ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದೆ. 23 ಕೋಟಿ ಆಸ್ತಿ ವಿಚಾರ ಮುಚ್ಚಿಟ್ಟಿದ್ದರು. ಬ್ಯಾಂಕ್ಬ್ಯಾಲೆನ್ಸ್ವಿವರವನ್ನೂ ತಪ್ಪು ಕೊಟ್ಟಿದ್ದರು. ಆದಾಯ ತೆರಿಗೆ ಸರಿಯಾಗಿ ಕಟ್ಟದೇ ಸರ್ಕಾರಕ್ಕೆ ವಂಚನೆ ಮಾಡಿದ್ದರು. ಇದೆಲ್ಲವನ್ನು ನಾವು ಸಾಬೀತುಪಡಿಸಿದ್ದೇವೆ. ಅಷ್ಟೇ ಅಲ್ಲದೇ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ರೇವಣ್ಣ ಪರವಾಗಿ ಅವರ ತಂದೆ 200 ಕ್ಕೂ ಹೆಚ್ಚು ಕಳ್ಳ ವೋಟುಗಳನ್ನು ಹಾಕಿಸಿದ್ದರು. ಅವರು ಜನರಿಗೆ ಹಣ ಹಂಚುವ ದೃಶ್ಯವೂ ಸೆರೆಯಾಗಿತ್ತು. ಇದರ ವಿರುದ್ಧ ಎಫ್ಐಆರ್ಕೂಡ ದಾಖಲಾಗಿತ್ತು. ಬಾವಿಕೆರೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನ ರಿಜಿಸ್ಟರ್ಮಾಡಿಕೊಂಡಿದ್ದರು. ನಾವು ಮಾಡಿದ ಎಲ್ಲಾ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನ್ಯಾಯಾಲಯದ ಮೇಲೆ ಅಪಾರ ವಿಶ್ವಾಸ ಇತ್ತು. ಯಾರೇ ತಪ್ಪು ಮಾಡಿದ್ದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ನಾನು ಅರ್ಜಿ ಸಲ್ಲಿಸಿದ್ದೆ. ಅಪರಾಧ ಸಾಬೀತಾದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರಜ್ವಲ್ರೇವಣ್ಣರನ್ನ ಅನರ್ಹಗೊಳಿಸಿ ಕೋರ್ಟ್ತೀರ್ಪು ನೀಡಿದೆ ಎಂದು ತಿಳಿಸಿದರು. ನಮ್ಮ ಹೋರಾಟಕ್ಕೆ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ. ನನಗೆ ಪ್ರಾಣ ಬೆದರಿಕೆ ಇತ್ತು. ಎಸ್ಪಿ ಅವರು ರಕ್ಷಣೆ ಉದ್ದೇಶದಿಂದ ನನಗೆ ಗನ್ಮ್ಯಾನ್ಕೂಡ ಕೊಟ್ಟಿದ್ದರು. ನನ್ನ ಕಾರಿನ ಗಾಜು ಕೂಡ ಹೊಡೆದಿದ್ದರು. ಒಬ್ಬ ವಕೀಲನನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ ಎಂಬ ನಂಬಿಕೆ ನನಗಿತ್ತು. ವಕೀಲನ ಮೇಲೆ ಹಲ್ಲೆ ನಡೆಸಿದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ನಾನು ಕೊಟ್ಟಿರುವ ದೂರು ನೂರಕ್ಕೆ ಕೇವಲ 1 ಭಾಗದಷ್ಟು ಮಾತ್ರ. ಇದನ್ನು ನೀಡುವುದಕ್ಕೆ ನಾನು 4 ವರ್ಷ ತೆಗೆದುಕೊಂಡೆ. ಅಷ್ಟೊಂದು ಅಕ್ರಮ, ಭ್ರಷ್ಟಾಚಾರ ಎಸಗಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನು ಕೂಡ ಸಾಬೀತುಪಡಿಸುತ್ತೇನೆ. ನನ್ನ ಹೋರಾಟ ಮುಂದುವರಿಸುತ್ತೇನೆ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದು ನನ್ನ ಗುರಿ. ಅವರಿಂದ ಎಷ್ಟು ಕುಟುಂಬಗಳ ಜೀವನ ಹಾಳಾಗಿದೆ. ಯಾರ್ಯಾರಿಗೆ ಅನ್ಯಾಯ ಆಗಿದೆ ಎಂಬ ಬಗ್ಗೆ ರಾಜ್ಯದ ಜನತೆ ಮುಂದೆ ಹೇಳುತ್ತೇನೆ.