5 ಕೆಜಿ ಅಕ್ಕಿ ಬದಲು ಹಣಭಾಗ್ಯ: 3ನೇ ಗ್ಯಾರಂಟಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆರಂಭ

ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆಗೆ ಹಣ ವರ್ಗಾವಣೆ ಮೂಲಕ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಅನ್ನಭಾಗ್ಯ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಅಕ್ಕಿ ಲಭ್ಯವಾಗದ ಕಾರಣ ಪ್ರತಿ ವ್ಯಕ್ತಿಗೆ 5 ಕೆ.ಜಿ. ಅಕ್ಕಿ ದರ ತಿಂಗಳಿಗೆ 170 ರು.ಗಳಂತೆ ಕುಟುಂಬ ಸದಸ್ಯರ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕುರಿತ ಸಮಾರಂಭ ನಡೆಯಲಿದೆ.

Leave a Reply

Your email address will not be published. Required fields are marked *